ಕಸ ಹಾಕಲು' ಹೋದವಳು ಕಾಲ್ಕಿತ್ತಳು: ಪ್ರಿಯಕರನ ಜೊತೆ ಇಬ್ಬರು ಮಕ್ಕಳ ತಾಯಿ ಪರಾರಿ!

Bengaluru Division:

Font size:

ಮನೆಮಂದಿಗೆ ನಿದ್ದೆ ಮಾತ್ರೆ ಹಾಕಿ 'ಆಂಟಿ' ಎಸ್ಕೇಪ್; ಬ್ಯಾಗ್ ಹಿಡಿದು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರು:ರಾಜಧಾನಿಯ ಬಾಗಲಗುಂಟೆಯಲ್ಲಿ ಸಿನಿಮಾ ಮಾದರಿಯ ರೋಚಕ ಘಟನೆಯೊಂದು ನಡೆದಿದ್ದು, ‘ಕಸ ಹಾಕಿ ಬರುತ್ತೇನೆ’ ಎಂದು ಮನೆಯಿಂದ ಹೊರಬಂದ ಇಬ್ಬರು ಮಕ್ಕಳ ತಾಯಿ, ತನ್ನ ಪ್ರಿಯಕರನ ಜೊತೆ ನಾಪತ್ತೆಯಾಗಿದ್ದಾಳೆ. ಹೆಂಡತಿಯ ಈ 'ನಿಗೂಢ' ನಡೆಯಿಂದ ಕಂಗೆಟ್ಟ ಪತಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕಟಿಂಗ್ ಶಾಪ್ ಮಾಲೀಕನ ಜೊತೆ 'ಲಿಂಕ್':

ಬಾಗಲಗುಂಟೆಯ ನಿವಾಸಿ ಶರತ್ ಕುಮಾರ್ ಎಂಬುವವರ ಪತ್ನಿಯೇ ನಾಪತ್ತೆಯಾದ ಮಹಿಳೆ. ಪತಿ ಶರತ್ ಕೆಲಸಕ್ಕೆ ಹೋದ ಸಮಯದಲ್ಲಿ ಅದೇ ಏರಿಯಾದಲ್ಲಿ ಕಟಿಂಗ್ ಶಾಪ್ ನಡೆಸುತ್ತಿದ್ದ ಪ್ರಭು ಎಂಬಾತನ ಜೊತೆ ಈಕೆಗೆ ನಿಕಟ ಸಂಪರ್ಕವಿತ್ತು ಎನ್ನಲಾಗಿದೆ. ಪತ್ನಿಯ ಮೊಬೈಲ್‌ಗೆ ಪ್ರಭು ರೀಚಾರ್ಜ್ ಮಾಡಿಸುತ್ತಿದ್ದ ವಿಷಯ ತಿಳಿದಾಗ ದಂಪತಿ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಪತಿ ಎಷ್ಟೇ ಬುದ್ಧಿವಾದ ಹೇಳಿದರೂ ಪತ್ನಿ ಮಾತ್ರ ತನ್ನ ಹಳೆ ಚಾಳಿ ಮುಂದುವರಿಸಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.

ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ಸಂಚು?

ಏಪ್ರಿಲ್ 11ರ ರಾತ್ರಿ ಈಕೆ ಸ್ಕೆಚ್ ಹಾಕಿ ಮನೆ ಬಿಟ್ಟಿದ್ದಾಳೆ. ಹೋಗುವ ಮುನ್ನ ಪತಿ ಮತ್ತು ಮಕ್ಕಳಿಗೆ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅವರೆಲ್ಲರೂ ಗಾಢ ನಿದ್ದೆಗೆ ಜಾರುವಂತೆ ಮಾಡಿದ್ದಾಳೆ ಎನ್ನಲಾಗಿದೆ. ರಾತ್ರಿ 11:57ರ ಸುಮಾರಿಗೆ ಮನೆಯಲ್ಲಿದ್ದವರು ನಿದ್ದೆಯಲ್ಲಿದ್ದಾಗ, ಒಂದು ಕೈಯಲ್ಲಿ ಕಸದ ಬಕೆಟ್ ಹಾಗೂ ಮತ್ತೊಂದು ಕೈಯಲ್ಲಿ ಬಟ್ಟೆ ಬರೆಗಳಿದ್ದ ಬ್ಯಾಗ್ ಹಿಡಿದುಕೊಂಡು ಈಕೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ ಎಂದು ಪತಿ ದೂರಿನಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ.

ಸಿಸಿಟಿವಿಯಲ್ಲಿ ಬಣ್ಣ ಬಯಲು:

ಮಹಿಳೆಯು ಬ್ಯಾಗ್ ಹಿಡಿದು ಸದ್ದಿಲ್ಲದೆ ಹೋಗುತ್ತಿರುವ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಇತ್ತ ಪತ್ನಿ ಕಾಣದೆ ಕಂಗಾಲಾದ ಶರತ್,  ಹುಡುಕಾಟ ನಡೆಸಿ ಕೊನೆಗೆ ಬಾಗಲಗುಂಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಈ ಕಿಲಾಡಿ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಬಲೆ ಬೀಸಿದ್ದಾರೆ.

Comments

Leave a Comment

Prev Post ಕನಸಿನ ಪಯಣದಲಿ ಕಣ್ಣೀರಿನ ಧಾರೆ: ಪತಿ ರಿತೇಶ್ ಮಾತು ಕೇಳಿ ವೇದಿಕೆಯಲ್ಲೇ ಕಣ್ಣೀರಿಟ್ಟ ಜೆನಿಲಿಯಾ!
Next Post ಸೈಕಲ್ ಸವಾರನಿಗೂ ಟೋಲ್ ಬರೆ: ಇದು ತೆರಿಗೆಯೋ ಅಥವಾ ಹಗಲು ದರೋಡೆಯೋ?

ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’

Kantara Chapter 1 box office: ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ 100 ಕೋಟಿಯ ಗಡಿಯತ್ತ ಸಿನಿಮಾ ದಾಪುಗಾಲು ಹಾಕಿದ್ದು ಆಯಾ ರಾಜ್ಯಗಳಲ್ಲಿ ಕೆಲ ಹೊಸ ದಾಖಲೆಗಳನ್ನು ಸಹ ಬರೆದಿದೆ. ಉತ್ತರ ಭಾರತದಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಈಗಾಗಲೇ ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರ ಹಿಟ್ ಸಿನಿಮಾಗಳ ಗಳಿಕೆಯ ದಾಖಲೆಗಳನ್ನೇ ಮುರಿದು ಹಾಕಿದೆ.

ಬಾರದ ಲೋಕಕ್ಕೆ ಹೋದ ‘ಉಷಾ’: ತಪ್ಪು ಒಪ್ಪಿಕೊಂಡರೂ ಮನ್ನಿಸಲಿಲ್ಲವೇ ಈ ಸಮಾಜ?

​"ನಾನು ತಪ್ಪು ಮಾಡಿದ್ದು ನಿಜ, ಆದ್ರೆ ಈ ಕಿರುಕುಳ ತಾಳಲಾರೆ.." - ಕಣ್ಣೀರು ಹಾಕುತ್ತಲೇ ಸಾವಿನ ಮನೆ ಸೇರಿದ ಅಬಲೆ!

ಧಾರವಾಡ ಸೆಂಟ್ರಲ್ ಜೈಲ್ 'ಡ್ರಗ್ಸ್' ದಂಧೆ ಅಡ್ಡ: ಬೇಲಿಯೇ ಎದ್ದು ಹೊಲ ಮೇಯ್ದ ರಣರೋಚಕ ಸ್ಟೋರಿ!

ಕತ್ತಲಲ್ಲಿ ಖೈದಿಗಳಿಗೆ 'ಕಿಕ್' ನೀಡುತ್ತಿದ್ದ ಖಾಕಿಧಾರಿಗಳು: ಮುತಾಲಿಕ್ ಎಚ್ಚರಿಕೆ ಬೆನ್ನಲ್ಲೇ ಪೊಲೀಸರ ಮಿಡ್‌ನೈಟ್ ಆಪರೇಷನ್ ಸಕ್ಸಸ್!

ಮಂಗಳೂರಿನಲ್ಲಿ ನೆತ್ತರು ಹರಿಸಿದ ಗ್ಯಾಂಗ್‌ವರ್: ತೊಕ್ಕೊಟ್ಟು ಫ್ಲೈಓವರ್ ಮೇಲೆ 'ಟಾಬ್ಲೆಟ್ ಆರಿಫ್' ಭೀಕರ ಕೊಲೆ!

ಸಿನಿಮೀಯ ಮಾದರಿಯಲ್ಲಿ ನಡೆದ ಹತ್ಯೆ: ಬೈಕ್ ಸವಾರನ ಮೇಲೆ ಕಾರ್ ಹರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾದ ದುಷ್ಕರ್ಮಿಗಳು!

ತುಂಗಭದ್ರಾ ನದಿಯ ಮಡಿಲಲ್ಲಿ ಕರಗಿದ ಕನಸುಗಳು: ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ

ಮದುವೆಯ ಸಂಭ್ರಮದ ನಡುವೆ ಮರಣ ಮೃದಂಗ: ರಾಯಚೂರು ಕುಟುಂಬದಲ್ಲಿ ಆವರಿಸಿದ ಶೋಕದ ಕಾರ್ಮೋಡ

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಯಲು: ಡಾ. ಸಮೀಕ್ಷಾ ರೆಡ್ಡಿ ಸಾವಿನ ಸುತ್ತ ನಿಗೂಢ ಜಾಲ!

ಅಲ್ಲಿ ಎಲ್ಲವೂ ಸರಿಯಿಲ್ಲ!" - ವೈದ್ಯೆಯ ಕೊನೆಯ ವಾಟ್ಸಪ್ ಸಂದೇಶಗಳು ಬಯಲು ಮಾಡಿದ ಭೀಕರ ವಾಸ್ತವ!

Read all News