​‘ನನ್ನ ಮೇಲೆ ಸುಳ್ಳು ಪೋಕ್ಸೋ ಕೇಸ್: ನ್ಯಾಯಕ್ಕಾಗಿ 9ನೇ ಮಹಡಿ ಏರಿದ ಯುವಕ!’

Bengaluru Rural:

Font size:

ದೇವನಹಳ್ಳಿಯಲ್ಲಿ ಹೈಡ್ರಾಮಾ: 7 ಗಂಟೆಗಳ ಕಾಲ ಅಗ್ನಿಶಾಮಕ ದಳ, ಪೊಲೀಸರೊಂದಿಗೆ ಕಣ್ಣಾಮುಚ್ಚಾಲೆ; ಕೊನೆಗೂ ಸುರಕ್ಷಿತವಾಗಿ ಕೆಳಗಿಳಿದ ಆನಂದ್

ದೇವನಹಳ್ಳಿ: ಪ್ರೀತಿ, ಮದುವೆ, ಜೈಲು ವಾಸ.. ಇವೆಲ್ಲದರ ನಡುವೆ "ನನಗೆ ಅನ್ಯಾಯವಾಗಿದೆ" ಎಂದು ಕಿರುಚಾಡುತ್ತಾ ಯುವಕನೊಬ್ಬ ಒಂಬತ್ತು ಮಹಡಿಯ ಕಟ್ಟಡದ ತುತ್ತತುದಿ ಏರಿ ಆತ್ಮಹತ್ಯೆಗೆ ಯತ್ನಿಸಿದ ರೋಚಕ ಘಟನೆ ದೇವನಹಳ್ಳಿಯ ಬೈಪಾಸ್ ರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ನಡೆದಿದೆ. ಸುಮಾರು ಏಳು ಗಂಟೆಗಳ ಕಾಲ ಇಡೀ ಪೊಲೀಸ್ ಪಡೆ ಹಾಗೂ ಅಗ್ನಿಶಾಮಕ ದಳವನ್ನು ನಡುರಸ್ತೆಯಲ್ಲಿ ನಿಲ್ಲಿಸಿದ ಈ ಹೈಡ್ರಾಮಾ ಕೊನೆಗೆ ಯುವಕನ ಬಂಧನದೊಂದಿಗೆ ಅಂತ್ಯಕಂಡಿದೆ.

ಏನಿದು ಘಟನೆ?

​ದೇವನಹಳ್ಳಿಯ ಅಂಬೇಡ್ಕರ್ ಕಾಲೋನಿಯ ನಿವಾಸಿ ಆನಂದ್ ಎಂಬಾತನೇ ಈ ಸಾಹಸಕ್ಕೆ ಕೈಹಾಕಿದವನು. 2023ರಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗಿದ್ದ ಈತನ ಮೇಲೆ ಪೋಕ್ಸೋ (POCSO) ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ಆನಂದ್, ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಆದರೆ, ಹುಡುಗಿಯ ಕಡೆಯವರು ಮತ್ತೆ ದೂರು ನೀಡುತ್ತಿದ್ದಾರೆ ಮತ್ತು ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಅಪಾರ್ಟ್‌ಮೆಂಟ್ ಮೇಲೆ ಏರಿ ಕುಳಿತಿದ್ದಾನೆ.

ಡಿಸಿ, ಕಮಿಷನರ್ ಬರಲೇಬೇಕು ಎಂದು ಪಟ್ಟು!

​"ನನ್ನ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ, ನನಗೆ ನ್ಯಾಯ ಬೇಕು. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರ್ ಸ್ಥಳಕ್ಕೆ ಬರುವವರೆಗೂ ನಾನು ಕೆಳಗಿಳಿಯುವುದಿಲ್ಲ" ಎಂದು ಪಟ್ಟು ಹಿಡಿದು ಕಟ್ಟಡದ ಅಂಚಿನಲ್ಲಿ ನಿಂತು ಆತಂಕ ಸೃಷ್ಟಿಸಿದ. ಈ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದರು.

"ನಾನೇನು ನಾಟಕ ಮಾಡುತ್ತಿಲ್ಲ. ಪ್ರೀತಿ ಮಾಡಿದ ತಪ್ಪಿಗೆ ನನ್ನ ಮೇಲೆ ಸುಳ್ಳು ದೂರು ನೀಡಿ ಜೀವನ ಹಾಳು ಮಾಡಿದ್ದಾರೆ. ಆ ದೂರುಗಳನ್ನು ವಾಪಸ್ ಪಡೆಯುವವರೆಗೂ ನಾನು ಕೆಳಗೆ ಬರಲ್ಲ."

ಆನಂದ್, ಆರೋಪಿ


7 ಗಂಟೆಗಳ ಕಾರ್ಯಾಚರಣೆ

​ಸ್ಥಳಕ್ಕೆ ಧಾವಿಸಿದ ದೇವನಹಳ್ಳಿ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ (SDRF) ತಂಡಗಳು ಯುವಕನನ್ನು ಕೆಳಗಿಳಿಸಲು ಹರಸಾಹಸ ಪಟ್ಟವು. ಮಧ್ಯಾಹ್ನ 12ಕ್ಕೆ ಶುರುವಾದ ಈ ಹೈಡ್ರಾಮಾ ಸಂಜೆ 7 ಗಂಟೆಯವರೆಗೂ ಮುಂದುವರಿಯಿತು. ಅಧಿಕಾರಿಗಳು ಮೈಕ್ ಮೂಲಕ ಆತನ ಮನವೊಲಿಸಲು ಪ್ರಯತ್ನಿಸಿದರು. ಕೊನೆಗೆ ಆತನ ಬೇಡಿಕೆಗಳನ್ನು ಆಲಿಸುವ ಮತ್ತು ರಕ್ಷಣೆ ನೀಡುವ ಭರವಸೆ ನೀಡಿದ ನಂತರ ಆತ ಕೆಳಗಿಳಿಯಲು ಒಪ್ಪಿದ.

ಪೊಲೀಸ್ ವಶಕ್ಕೆ

​ಸುರಕ್ಷಿತವಾಗಿ ಕೆಳಗಿಳಿಯುತ್ತಿದ್ದಂತೆ ಪೊಲೀಸರು ಆನಂದ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತ್ಮಹತ್ಯೆ ಬೆದರಿಕೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರೀತಿಯ ಹೆಸರಿನಲ್ಲಿ ಕಾನೂನು ಮೀರಿ ಪೋಕ್ಸೋ ಸುಳಿಗೆ ಸಿಲುಕಿದ್ದ ಯುವಕ, ಈಗ ನ್ಯಾಯಕ್ಕಾಗಿ ನಡೆಸಿದ ಈ ಹಾದಿ ತಪ್ಪಿದ ಹೋರಾಟ ದೇವನಹಳ್ಳಿಯಲ್ಲಿ ದಿನವಿಡೀ ಚರ್ಚೆಗೆ ಗ್ರಾಸವಾಗಿತ್ತು.

Comments

Leave a Comment

Prev Post ಸೈಕಲ್ ಸವಾರನಿಗೂ ಟೋಲ್ ಬರೆ: ಇದು ತೆರಿಗೆಯೋ ಅಥವಾ ಹಗಲು ದರೋಡೆಯೋ?
Next Post ರಕ್ಷಕರೇ ಭಕ್ಷಕರಾದರು: ಉದ್ಯಮಿ ಮನೆಯಲ್ಲಿ ಪೊಲೀಸರಿಂದಲೇ 'ಖಾಕಿ' ದರೋಡೆ!

ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’

Kantara Chapter 1 box office: ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ 100 ಕೋಟಿಯ ಗಡಿಯತ್ತ ಸಿನಿಮಾ ದಾಪುಗಾಲು ಹಾಕಿದ್ದು ಆಯಾ ರಾಜ್ಯಗಳಲ್ಲಿ ಕೆಲ ಹೊಸ ದಾಖಲೆಗಳನ್ನು ಸಹ ಬರೆದಿದೆ. ಉತ್ತರ ಭಾರತದಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಈಗಾಗಲೇ ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರ ಹಿಟ್ ಸಿನಿಮಾಗಳ ಗಳಿಕೆಯ ದಾಖಲೆಗಳನ್ನೇ ಮುರಿದು ಹಾಕಿದೆ.

ಬಾರದ ಲೋಕಕ್ಕೆ ಹೋದ ‘ಉಷಾ’: ತಪ್ಪು ಒಪ್ಪಿಕೊಂಡರೂ ಮನ್ನಿಸಲಿಲ್ಲವೇ ಈ ಸಮಾಜ?

​"ನಾನು ತಪ್ಪು ಮಾಡಿದ್ದು ನಿಜ, ಆದ್ರೆ ಈ ಕಿರುಕುಳ ತಾಳಲಾರೆ.." - ಕಣ್ಣೀರು ಹಾಕುತ್ತಲೇ ಸಾವಿನ ಮನೆ ಸೇರಿದ ಅಬಲೆ!

ಧಾರವಾಡ ಸೆಂಟ್ರಲ್ ಜೈಲ್ 'ಡ್ರಗ್ಸ್' ದಂಧೆ ಅಡ್ಡ: ಬೇಲಿಯೇ ಎದ್ದು ಹೊಲ ಮೇಯ್ದ ರಣರೋಚಕ ಸ್ಟೋರಿ!

ಕತ್ತಲಲ್ಲಿ ಖೈದಿಗಳಿಗೆ 'ಕಿಕ್' ನೀಡುತ್ತಿದ್ದ ಖಾಕಿಧಾರಿಗಳು: ಮುತಾಲಿಕ್ ಎಚ್ಚರಿಕೆ ಬೆನ್ನಲ್ಲೇ ಪೊಲೀಸರ ಮಿಡ್‌ನೈಟ್ ಆಪರೇಷನ್ ಸಕ್ಸಸ್!

ಮಂಗಳೂರಿನಲ್ಲಿ ನೆತ್ತರು ಹರಿಸಿದ ಗ್ಯಾಂಗ್‌ವರ್: ತೊಕ್ಕೊಟ್ಟು ಫ್ಲೈಓವರ್ ಮೇಲೆ 'ಟಾಬ್ಲೆಟ್ ಆರಿಫ್' ಭೀಕರ ಕೊಲೆ!

ಸಿನಿಮೀಯ ಮಾದರಿಯಲ್ಲಿ ನಡೆದ ಹತ್ಯೆ: ಬೈಕ್ ಸವಾರನ ಮೇಲೆ ಕಾರ್ ಹರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾದ ದುಷ್ಕರ್ಮಿಗಳು!

ತುಂಗಭದ್ರಾ ನದಿಯ ಮಡಿಲಲ್ಲಿ ಕರಗಿದ ಕನಸುಗಳು: ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ

ಮದುವೆಯ ಸಂಭ್ರಮದ ನಡುವೆ ಮರಣ ಮೃದಂಗ: ರಾಯಚೂರು ಕುಟುಂಬದಲ್ಲಿ ಆವರಿಸಿದ ಶೋಕದ ಕಾರ್ಮೋಡ

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಯಲು: ಡಾ. ಸಮೀಕ್ಷಾ ರೆಡ್ಡಿ ಸಾವಿನ ಸುತ್ತ ನಿಗೂಢ ಜಾಲ!

ಅಲ್ಲಿ ಎಲ್ಲವೂ ಸರಿಯಿಲ್ಲ!" - ವೈದ್ಯೆಯ ಕೊನೆಯ ವಾಟ್ಸಪ್ ಸಂದೇಶಗಳು ಬಯಲು ಮಾಡಿದ ಭೀಕರ ವಾಸ್ತವ!

Read all News